'ಝೀರೋ ಟ್ರಾಫಿಕಲ್ಲಿ ಓಡಾಡಿದ್ದ ಪರಂ ಸ್ಥಿತಿ ಏನಾಯ್ತು? ಪೊಲೀಸರು ಇಲ್ಲ, ನೊಣ ಹೊಡೆಯೋರು ಇಲ್ಲ'
ತುಮಕೂರು: ಹಿಂದೆ ಮುಂದೆ ಪೊಲೀಸರನ್ನು ಇಟ್ಟುಕೊಂಡು ಝೀರೋ ಟ್ರಾಫಿಕಲ್ಲಿ ತಿರುಗಾಡಿದ್ದ ಮಾಜಿ ಡಿಸಿಎಂ ಜಿ, ಪರಮೇಶ್ವರ್ ಪರಿಸ್ಥಿತಿ ಏನಾಯ್ತು ನೋಡಿ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ವ್ಯಂಗ್ಯವಾಡಿದ್ದಾರೆ.
ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ರೈತರಿಗೆ ಸಾಲ ನೀಡಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜಣ್ಣ, ಆ ಪುಣ್ಯಾತ್ಮನಿಗೆ ಕಷ್ಟದಲ್ಲಿದ್ದಾಗ ಸಹಾಯ ಮಾಡಿ ಶಾಸಕನಾಗಿ ಮಾಡಿದೆ. ಆತ ಗೆದ್ದು ಶಾಸಕನಾಗಿ ಡಿಸಿಎಂ ಆದ.
ಹಿಂದೂ ಮುಂದೂ ಪೊಲೀಸರನ್ನು ಇಟ್ಟಕೊಂಡು ಝೀರೋ ಟ್ರಾಫಿಕಲ್ಲಿ ತಿರುಗಾಡಿದ. ಈಗ ಅಧಿಕಾರ ಇಲ್ಲ ಪರಿಸ್ಥಿತಿ ಹೇಗಾಗಿದೆ ನೋಡಿ. ಪೊಲೀಸರು ಹಿಂದೂ ಇಲ್ಲ ಮುಂದೂ ಇಲ್ಲ. ನೊಣ ಹೊಡಿಯೋರೂ ಇಲ್ಲ ಎಂದು ವ್ಯಂಗ್ಯವಾಡಿದರು.
ಒಂದೇ ಬೇಂಚಲ್ಲಿ ಕುಳಿತು ಕಲಿತವರು. ಹಾಗಾಗಿ ಅವನನ್ನು ಕೊರಟಗೆರೆಯಿಂದ ಗೆಲ್ಲಿಸಿಕೊಂಡು ಬಂದೇ. ಆತನಿಗೆ ಉಪಕಾರ ಸ್ಮರಣೆ ಇಲ್ಲ. ನಾನು ಅಧ್ಯಕ್ಷನಾಗಿದ್ದ ಡಿಸಿಸಿ ಬ್ಯಾಂಕನ್ನು ಸೂಪರ್ ಸೀಡ್ ಮಾಡುವ ಮೂಲಕ ನನ್ನ ಅಧಿಕಾರ ಕಿತ್ತುಕೊಳ್ಳುವ ಪಿತೂರಿ ಮಾಡಿದ್ದ ಎಂದು ಪರಮೇಶ್ವರ್ ಅವರ ಹೆಸರನ್ನು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ