ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿರುವ ಕಾರ್ಯಕರ್ತನೊಬ್ಬನ ಮೇಲೆ ಬರ್ಬರ ಹಲ್ಲೆ ನಡೆಸಿರುವುದರ ವಿರುದ್ಧ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ಮಧ್ಯಾಹ್ನ ನಗರದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ಕಾರ್ಯಕರ್ತನೊಬ್ಬನ ಮೇಲೆ ಅಪರಿಚಿತ ಕಿಡಿಗೇಡಿಗಳು ಬರ್ಬರ ಹಲ್ಲೆ ನಡೆಸಿದ್ದಾರೆ. ನಗರದ ಶಾಂತಿಯನ್ನು ಭಂಗಗೊಳಿಸುವ ಇಂತಹ ಹೀನ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.
ತನಿಖೆಯ ನಂತರ ಈ ಸಮಾಜ ಘಾತುಕರ ಮೇಲೆ ಕಠಿಮ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಶಾಂತಿ ಸೌಹಾರ್ದತೆ ಕಾಪಾಡಬೇಕೆಂದು ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ.
Advertisement