ಸಾರಾ ಮಹೇಶ್ ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡುತ್ತಾರೆ!
ಮೈಸೂರು: ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಸ್ಥಾನಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಸದ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿದ್ದು, ಒಪ್ಪಂದದ ಪ್ರಕಾರ ಈ ಬಾರಿ ಜೆಡಿಎಸ್ ಪಕ್ಷಕ್ಕೆ ಮೇಯರ್ ಸ್ಥಾನ ಸಿಗುತ್ತಿದೆ.
ಹೀಗಾಗಿ, ಜೆಡಿಎಸ್ನಲ್ಲಿ ಬಿರುಸಿನ ರಾಜಕೀಯ ಶುರುವಾಗಿದೆ. ಆದರೆ ಆರಂಭದಲ್ಲೆ ನನಗೂ ಇದಕ್ಕೂ ಸಂಬಂಧ ಇಲ್ಲ. ಪಕ್ಷ ಹೇಳಿದವರಿಗೆ ನಾನು ನನ್ನ ಮತ ಹಾಕಿ ಬರುತ್ತೇನೆ ಅಷ್ಟೇ ಎಂದು ಜಿಟಿಡಿ ಹೇಳಿದ್ದು, ಈ ಹೇಳಿಕೆ ಜಿಟಿಡಿ, ಬೆಂಬಲಿಗ ಪಾಲಿಕೆ ಸದಸ್ಯರಲ್ಲಿ ಆತಂಕ ಸೃಷ್ಟಿಸಿದೆ.
ನಾನು ಉಸ್ತುವಾರಿ ಸಚಿವನಾಗಿರಲಿ, ಮತದಾರನಾಗಿರಲಿ, ಯಾವತ್ತೂ ಅವರು ನನ್ನನ್ನು ಮೇಯರ್ ಚುನಾವಣೆಯಲ್ಲಿ ಪರಿಗಣಿಸಿಲ್ಲ. ಹಾಗಾಗಿ ಈಗಲೂ ಅವರೇ ಚುನಾವಣೆ ಮಾಡಲಿ. ಪಕ್ಷ, ಹೈಕಮಾಂಡ್ ಯಾರನ್ನು ಅಭ್ಯರ್ಥಿ ಮಾಡುತ್ತೋ. ಅವರಿಗೆ ವೋಟ್ ಹಾಕೋದಷ್ಟೇ ನನ್ನ ಕೆಲಸ ಎಂದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ