ಬೆಂಗಳೂರು: ಕಾಂಗ್ರೆಸ್ನ ಯಾವುದೇ ಶಾಸಕರು ರಾಜೀನಾಮೆ ನೀಡುವುದಿಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ಅತೃಪ್ತ ಶಾಸಕರು ಗೈರು ಹಾಜರಿ ಬಗ್ಗೆ ಇಂದು ವಿಧಾನಸೌಧದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ನಾಳಿನ ಕಲಾಪಕ್ಕೆ ಅತೃಪ್ತ ಶಾಸಕರೆಲ್ಲರೂ ಭಾಗವಹಿಸುತ್ತಾರೆ ಎಂದಷ್ಟೇ ಉತ್ತರಿಸಿದರು.
ಇದೇ ವೇಳೆ ಕಾಂಗ್ರೆಸ್ನ ಕೆಲ ಶಾಸಕರು ರಾಜೀನಾಮೆ ನೀಡಲಿದ್ದಾರೆಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಮಧ್ಯೆ, ಜಂಟಿ ಅಧಿವೇಶನಕ್ಕೆ ಗೈರು ಹಾಜರಾದ ಕಾಂಗ್ರೆಸ್ ಶಾಸಕರಿಗೆ ಸಿದ್ದರಾಮಯ್ಯ ನೋಟಿಸ್ ಜಾರಿ ಮಾಡಿದ್ದಾರೆ.