ಆಡಿಯೋ ಟೇಪ್ ಗೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ಆಡಿಯೋ ಟೇಪ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಆಡಿರುವ ಮಾತುಗಳು ನಿಜಕ್ಕೂ ಆಘಾತಕಾರಿಯಾದದ್ದು. ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ಅವರು ಇಂತಹ ನೀಚ ರಾಜಕೀಯಕ್ಕೆ ಇಳಿಯುತ್ತಾರೆ ಎಂದು ತಿಳಿದಿರಲಿಲ್ಲ ಎಂದು ಸುರ್ಜೇವಾಲ ಕಿಡಿಕಾರಿದ್ದಾರೆ.