ಪ್ರಕರಣದ ತನಿಖೆ ನಡೆಸಲು ಸೂಚಿಸಿದ ಸ್ಪೀಕರ್ ರಮೇಶ್ ಕುಮಾರ್ ಇದನ್ನು ಸದನ ಸಮಿತಿಯಿಂದ ತನಿಖೆ ನಡೆಸಲು ಸಾಧ್ಯವಿಲ್ಲ, ಎಫ್ ಐ ಆರ್ ಹಾಕಿ ತನಿಖೆ ನಡೆಸಬೇಕು, ಎಫ್ ಐಆರ್ ದಾಖಲಾದ ನಂತರ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ, ನ್ಯಾಯಾಂಗ ತನಿಖೆ ಸುದೀರ್ಘ ಸಮಯ ಹಿಡಿಯುತ್ತದೆ, ನ್ಯಾಯಾಂಗ ತನಿಖೆಗೆ ನನಗೆ ಒಲವಿಲ್ಲ, ಹೀಗಾಗಿ ಏಜೆನ್ಸಿಗಳ ಮೂಲಕ ನಡೆಸಬೇಕು, ವಿಶೇಷ ತನಿಖಾ ತಂಡ ರಚಿಸಿ ಸರ್ಕಾರ ತನಿಖೆ ನಡೆಸಲಿ. ಯಾರಿಂದ ತನಿಖೆ ನಡೆಸಬೇಕು ಎಂಬುದು ಸರ್ಕಾರದ ವಿವೇಚನೆಗೆ ಬಿಟ್ಟದ್ದು ಎಂದು ತಿಳಿಸಿದ್ದಾರೆ,