ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಬಿಜೆಪಿ ಸದಸ್ಯರ ಧರಣಿ ಮತ್ತು ಪ್ರತಿಭಟನೆ ನಡುವೆಯೇ ಮಸೂದೆಗಳನ್ನು ಮಂಡಿಸಿದರು. ಸಭಾಧ್ಯಕ್ಷ ರಮೇಶ್ ಕುಮಾರ್ ಮಸೂದೆಗಳನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಈ ಪ್ರಕ್ರಿಯೆ ಕೆಲವೇ ನಿಮಿಷಗಳಲ್ಲಿ ಮುಕ್ತಾಯವಾಯಿತು.