ನಾಲ್ವರು ಅತೃಪ್ತ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ.ನಾಗೇಂದ್ರ, ಉಮೇಶ್ ಜಾಧವ್ ಹಾಗೂ ಮಹೇಶ್ ಕುಮಟಳ್ಳಿ ಅವರು ಪಕ್ಷದ ವಿಪ್ ಉಲ್ಲಂಘಿಸಿ ಶಾಸಕಾಂಗ ಪಕ್ಷದ ಸಭೆಗೆ ಹಾಗೂ ಬಜೆಟ್ ಅಧಿವೇಶನಕ್ಕೆ ಗೈರು ಆಗಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಈ ನಾಲ್ವರನ್ನು ಶಾಸಕತ್ವದಿಂದ ಅನರ್ಹಗೊಳಿಸುವಂತೆ ಸಿದ್ದರಾಮಯ್ಯ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿದ್ದರು.