ಪ್ರತಿ ಕ್ಷೇತ್ರವಾರು ನಾವು ಚುನಾವಣಾ ತಂತ್ರಗಾರಿಕೆ ರೂಪಿಸುತ್ತಿದ್ದೇವೆ, ಸೀಟು ಹಂಚಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ. ಗುಲ್ಬರ್ಗಾದಿಂದ ಮಲ್ಲಿಕಾರ್ಜುನ ಖರ್ಗೆ, ಚಿಕ್ಕಬಳ್ಳಾಪುರದಿಂದ ವೀರಪ್ಪ ಮೊಯ್ಲಿ, ಕೋಲಾರದಿಂದ ಕೆ.ಎಚ್ ಮುನಿಯಪ್ಪ, ಸ್ಪರ್ಧಿಸಲಿದ್ದಾರೆ, ಇನ್ನೂ ಉಳಿದ 25 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಾಗುವುದು, ಬೆಂಗಳೂರು ಸೆಂಟ್ರಲ್ ನಲ್ಲಿ ಕಾಂಗ್ರೆಸ್ ಗೆಲ್ಲುವ ಸಾದ್ಯತೆ ಹೆಚ್ಚಿದೆ, ಈ ಕ್ಷೇತ್ರಕ್ಕೆ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ.