ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಏಳೋ, ಐದೋ, ಮೂರೋ ಸೀಟು ಬಿಟ್ಟು ಕೊಡ್ತಾರೋ ಎಂಬುದು ಗೊತ್ತಿಲ್ಲ. ಆದರೆ ನಾವೇನು ಭಿಕ್ಷುಕರಲ್ಲ (ವಿ ಆರ್ ನಾಟ್ ಬೆಗ್ಗರ್ಸ್) ಎಂದು ಕಾಂಗ್ರೆಸ್ ನಾಯಕರ ಸೀಟು ಹಂಚಿಕೆ ನಿರ್ಧಾರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಇದರಿಂದಾಗಿ ಎರಡು ಪಕ್ಷಗಳ ನಾಯಕರ ಜಟಾಪಟಿ ತೀವ್ರಗೊಂಡಿದೆ.