ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ದಲಿತರು, ಹಿಂದುಳಿದವರ ಪರ ಬಿಜೆಪಿಗೆ ಒಲವಿಲ್ಲ. ಹೀಗಾಗಿ ಜೆ.ಡಿ.ನಾಯಕ್ ಮತ್ತೆ ಪಕ್ಷಕ್ಕೆ ವಾಪಸಾಗಿದ್ದಾರೆ, ಅವರ ವಾಪಸಾತಿಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ, ಲೋಕಸಭೆ ಚುನಾವಣೆಯಲ್ಲಿ ಅಲ್ಲಿ ಬದಲಾವಣೆ ತರಬೇಕು. ಈ ನಿಟ್ಟಿನಲ್ಲಿ ಜೆ.ಡಿ. ನಾಯಕ್ ಪಕ್ಷಕ್ಕೆ ಬಂದಿರುವುದು ಸಹಕಾರಿಯಾಗಲಿದೆ. ಅನಂತ್ ಕುಮಾರ್ ಹೆಗಡೆ ಕ್ಷೇತ್ರದ ಅಭಿವೃದ್ಧಿಗೆ ಏನೂ ಮಾಡಿಲ್ಲ. ಇಂತಹ ಒಬ್ಬ ಸಂಸದ ಅಲ್ಲಿ ಐದೈದು ಬಾರಿ ಗೆದ್ದಿರುವುದು ದುರಾದೃಷ್ಟಕರ. ಅವರನ್ನು ಬದಲಾಯಿಸಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ ಎಂದು ಹೇಳಿದರು.