ಗೆಲ್ಲುವ ಎಲ್ಲಾ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ: ಸಿದ್ದರಾಮಯ್ಯ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....
ಸಿದ್ದರಾಮಯ್ಯ
ಸಿದ್ದರಾಮಯ್ಯ
ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು ಲೋಕಸಭೆ ಚುನಾವಣೆಗೆ ಸ್ಥಾನ ಹಂಚಿಕೆ ಕುರಿತು  ಜೆಡಿಎಸ್ ಹಾಗೂ ಕಾಂಗ್ರೆಸ್ ಮಧ್ಯೆ ಕುರಿತು ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಗೆಲ್ಲುವ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಎರಡು ಪಕ್ಷಗಳು ಪರಸ್ಪರ  ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಲೋಕಸಭೆ ಚುನಾವಣೆ ಎದುರಿಸಲಿವೆ ಎಂದು ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದ್ದು, ಈಗಾಗಲೇ ಚುನಾವಣೆ ಸಮಿತಿ ಸಭೆ ಮಾಡಲಾಗಿದೆ. ಶೀಘ್ರವೇ ಇನ್ನೊಂದು ಸಭೆ ನಡೆಸಲಾಗುವುದು. ಮಂಡ್ಯದಿಂದ ಕಾರ್ಯಕರ್ತರ ಒತ್ತಾಯದ ಮೇರೆಗೆ ಚುನಾವಣೆ ಸ್ಪರ್ಧಿಸಲು ಸುಮಲತಾ ಇಂಗೀತ ವ್ಯಕ್ತಪಡಿಸಿದ್ದಾರೆ. ಆದರೆ, ಸೀಟು ಹಂಚಿಕೆ ಕುರಿತು ಪಕ್ಷ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಪ್ರಿಯಂಕಾ ಗಾಂಧಿ ಅವರ ರಾಜ್ಯ ಚುನಾವಣಾ ಪ್ರಚಾರ ಕುರಿತು ಮಾತನಾಡಿದ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ರಾಜಕೀಯ ಮೇಲೆ ಗಮನ ಕೇಂದ್ರಿಕರಿಸಿದ್ದಾರೆ. ಒಂದು  ವೇಳೆ ಅವರಿಗೆ ಸಮಯ ಸಿಕ್ಕರೆ ರಾಜ್ಯದಲ್ಲಿಯೂ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com