ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದ್ದು, ಈಗಾಗಲೇ ಚುನಾವಣೆ ಸಮಿತಿ ಸಭೆ ಮಾಡಲಾಗಿದೆ. ಶೀಘ್ರವೇ ಇನ್ನೊಂದು ಸಭೆ ನಡೆಸಲಾಗುವುದು. ಮಂಡ್ಯದಿಂದ ಕಾರ್ಯಕರ್ತರ ಒತ್ತಾಯದ ಮೇರೆಗೆ ಚುನಾವಣೆ ಸ್ಪರ್ಧಿಸಲು ಸುಮಲತಾ ಇಂಗೀತ ವ್ಯಕ್ತಪಡಿಸಿದ್ದಾರೆ. ಆದರೆ, ಸೀಟು ಹಂಚಿಕೆ ಕುರಿತು ಪಕ್ಷ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.