ಭ್ರಷ್ಟಾಚಾರ ನಿಗ್ರಹ ದಳ
ರಾಜಕೀಯ
ಜೆಡಿಎಸ್ ಶಾಸಕನಿಗೆ 5 ಕೋಟಿ ರು. ಹಣದ ಆಮೀಷ: ಸಿಎಂ ಹಾಗೂ ಮೂವರು ಬಿಜೆಪಿ ಮುಖಂಡರ ವಿರುದ್ಧ ಎಸಿಬಿ ಗೆ ದೂರು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಮುಖಂಡರು ಹಣದ ಆಮಿಷವೊಡ್ಡಿ 5 ಕೋಟಿ ರೂ. ಅಡ್ವಾನ್ಸ್ ನೀಡಿದ್ದರು ಎಂಬ ಕೋಲಾರ ಜೆಡಿಎಸ್ ಶಾಸಕ ...
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಮುಖಂಡರು ಹಣದ ಆಮಿಷವೊಡ್ಡಿ 5 ಕೋಟಿ ರೂ. ಅಡ್ವಾನ್ಸ್ ನೀಡಿದ್ದರು ಎಂಬ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಹೇಳಿಕೆ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಎಸಿಬಿಗೆ ದೂರು ನೀಡಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಶಾಸಕ ಡಾ. ಸಿ.ಎನ್ ಅಶ್ವತ್ಥನಾರಾಯಣ, ಎಸ್.ಆರ್ ವಿಶ್ವನಾಥ್, ಮಾಜಿ ಶಾಸಕ ಸಿ.ಪಿ ಯೋಗೀಶ್ವರ್ 30 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಅದಕ್ಕಾಗಿ ಅಡ್ವಾನ್ಸ್ 5 ಕೋಟಿ ರೂ. ನೀಡಿದ್ದರು ಎಂದು ಆರೋಪಿಸಲಾಗಿತ್ತಪ
ಈ ವಿಚಾರವನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರಿಗೆ ತಿಳಿಸಿದ್ದೆ, ಜತೆಗೆ 5 ಕೋಟಿ ರೂ.ವಾಪಸ್ ನೀಡಿದ್ದೆ ಎಂದು ಶಾಸಕ ಶ್ರೀನಿವಾಸಗೌಡ ಮಾಧ್ಯಮಗಳಿಕೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧರಿಸಿ ಕುರಿತು ಶಾಸಕರು ಹಾಗೂ ಸಿಎಂ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಟಿ.ಜೆ ಅಬ್ರಹಾಂ ದೂರಿನಲ್ಲಿ ಕೋರಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ