ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನವಾಣೆಗೆ ಪರಿಮಳಾ ಶ್ಯಾಮ್ ಬಿಟ್ಟರೇ ಬೇರಾರು ನಾಮಪತ್ರ ಸಲ್ಲಿಸಿರಲಿಲ್ಲ, ಅಂತರಸಂತೆ ಕ್ಷೇತ್ರದ ಜೆಡಿಎಸ್ ಸದಸ್ಯೆಯಾಗಿರುವ ಪರಿಮಳಾ ಶ್ಯಾಮ್ ವಿರುದ್ಧವಾಗಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಲಿದ್ದು, ಮೈತ್ರಿ ಲೆಕ್ಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಗೆಲುವು ಸಾಧಿಸಿದೆ.