ಖರ್ಗೆ ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ- ಶಾಮನೂರು ಶಿವಶಂಕರಪ್ಪ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಿನ ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ದಾವಣಗೆರೆ:  ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಿನ  ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಛಲವಾದಿ ಮಹಾಸಭಾ ವತಿಯಿಂದ ಏರ್ಪಡಿಸಲಾಗಿದ್ದ ಅಭಿನಂದನಾ ಹಾಗೂ ಜನ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿವಶಂಕರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ತಾಕತ್ತು ರಾಹುಲ್ ಗಾಂಧಿಗೆ ಇಲ್ಲ. ಆದರೆ, ಕಾಂಗ್ರೆಸ್ ಹಿರಿಯ ನಾಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಅಷ್ಟೇ ಅಲ್ಲ. ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ. ಮುಂದೆ ಅವರು ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮೊದಲ ದಲಿತ ಮುಖಂಡ ದಿವಂಗತ ಕೆ. ಎಚ್ , ರಂಗನಾಥ್,  ದಿ. ಬಸವಲಿಂಗಪ್ಪ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ, ಅವರು ಮುಖ್ಯಮಂತ್ರಿ ಆಗಲಿಲ್ಲ. ಈಗ ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಅಲ್ಲ, ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ , ನನ್ನಗೆ ಮೂರು ಬಾರಿ ಮುಖ್ಯಮಂತ್ರಿ ಅವಕಾಶ ಕಿತ್ತುಕೊಳ್ಳಲಾಯಿತು. ಬೇಕೋ ಬೇಡವೋ ಎಂಬಂತೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ತಮ್ಮನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com