9 ಜೆಡಿಎಸ್ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳ ಬಳಿಕ ಜೆಡಿಎಸ್ ತನ್ನ 9 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕಲ್ಪಿಸಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
Updated on
ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳ ಬಳಿಕ ಜೆಡಿಎಸ್ ತನ್ನ 9  ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕಲ್ಪಿಸಿದೆ. 
ಮಾಜಿ ಶಾಸಕರಿಗೆ ಅಧಿಕಾರ ನೀಡುವ ಮೂಲಕ ಲೋಕಸಭಾ ಚುನಾವಣೆ ವೇಳೆ ರಾಜಕೀಯ ಲಾಭ ಮಾಡಿಕೊಳ್ಳಲು ಉದ್ದೇಶಿಸಿದ್ದ ಜೆಡಿಎಸ್ ಪಕ್ಷ ಇದೀಗ ಶಾಸಕರ ಒತ್ತಡಕ್ಕೆ ಮಣಿದು ಮಣೆ ಹಾಕಿದೆ. 9 ಶಾಸಕರಿಗೆ  ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶಿಸಿದ್ದಾರೆ.
ನಾಗನಗೌಡ ಕಂದಕೂರು- ಅಧ್ಯಕ್ಷರು - ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ
ರಾಜಾವೆಂಕಟಪ್ಪ ನಾಯಕ್- ಅಧ್ಯಕ್ಷರು- ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮ.
ಡಿ.ಸಿ.ಗೌರಿ ಶಂಕರ್ -ಅಧ್ಯಕ್ಷರು-ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್( ಎಂಎಎಸ್ಐಎಲ್) 
ಬಿ.ಸತ್ಯನಾರಾಯಣ -ಅಧ್ಯಕ್ಷರು- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
ನಿಸರ್ಗ ನಾರಾಯಣ ಸ್ವಾಮಿ -ಅಧ್ಯಕ್ಷರು-ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ.
ಡಾ.ಕೆ.ಅನ್ನದಾನಿ-ಅಧ್ಯಕ್ಷರು-ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ.
ಕೆ.ಎಂ.ಶಿವಲಿಂಗೇಗೌಡ-ಅಧ್ಯಕ್ಷರು- ಕರ್ನಾಟಕ ಗೃಹ ಮಂಡಳಿ
ಕೆ.ಮಹದೇವ್- ಅಧ್ಯಕ್ಷರು- ಕರ್ನಾಟಕ ರಾಜ್ಯ ಕೈಗಾರಿಕೆ ಮೂಲ ಸೌಕರ್ಯ ಅಭಿವೃದ್ದಿ ನಿಗಮ.
ಮಹಮ್ಮದ್ ಜಫ್ರುಲ್ಲಾ ಖಾನ್ ಅವರನ್ನು ಕರ್ನಾಟಕ ಅಲ್ಪ ಸಂಖ್ಯಾತ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com