ಭಯೋತ್ಪಾದಕರನ್ನು ಮುಗಿಸೋದಾದ್ರೆ ಮುಗಿಸಿ: ಪ್ರಧಾನಿ ಮೋದಿಗೆ ದೇವೇಗೌಡರ ಬೆಂಬಲ!

ಪಾಕಿಸ್ತಾನ ನೆಲಕ್ಕೆ ನುಗ್ಗಿ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ನರೇಂದ್ರ ಮೋದಿ, ಹೆಚ್ ಡಿ ದೇವೇಗೌಡ
ನರೇಂದ್ರ ಮೋದಿ, ಹೆಚ್ ಡಿ ದೇವೇಗೌಡ
ಹಾಸನ: ಪಾಕಿಸ್ತಾನ ನೆಲಕ್ಕೆ ನುಗ್ಗಿ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯೋತ್ಪಾದಕರನ್ನು ಮುಗಿಸೋದಾದ್ರೆ ಮುಗಿಸಿ ನಿಮ್ಮಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ. 
ದೇಶದ ಮೇಲೆ ದಾಳಿ ನಡೆದಾಗ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು. ಉಗ್ರರನ್ನು ಮುಗಿಸುವುದಾದರೇ ಖಂಡಿತ ಮುಗಿಸಿ ಅದಕ್ಕೆ ನಮ್ಮ ಬೆಂಬಲವಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೈ ಜವಾನ್ ಜೈ ಕಿಸಾನ್ ಎಂಬ ಮಾತಿನಂತೆ ನಾವೆಲ್ಲರೂ ದೇಶಕ್ಕಾಗಿ ಒಗ್ಗಟ್ಟಾಗಬೇಕು ಎಂದು ದೇವೇಗೌಡ ಅವರ ಹೇಳಿದರು.
ಇದೇ ವೇಳೆ ರೈತರ ಕುರಿತು ಪ್ರಧಾನಿ ಮೋದಿ ಯಾವುದೇ ಯೋಜನೆಗಳನ್ನು ಮಾಡಿಲ್ಲ. ಆದರೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತಿ ರೈತರ ಕುಟುಂಬಕ್ಕೆ 6 ಸಾವಿರ ರುಪಾಯಿ ನೀಡುತ್ತೇನೆ ಎಂದು ಹೇಳುತ್ತಿರುವುದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com