ಬೆಳಗಾವಿ: ನೀವು ಹುಚ್ಚರಿದ್ದೀರಿ, ನಿಮ್ಮನ್ನು ಒದಿಯಬೇಕು, ಜಾಡಿಸಿ ಒದಿಯಬೇಕು ಅತಿಯಾಯ್ತು ನಿಮ್ಮದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮದವರ ವಿರುದ್ಧ ಹರಿಹಾಯ್ದಿದ್ದಾರೆ.
ಕಳೆದ ಎಂಟು ದಿನಗಳಿಂದ ಸ್ವತಃ ಕಾಂಗ್ರೆಸ್ನವರಿಗೇ ಸಿಗದೆ ಕಣ್ಮರೆಯಾಗಿದ್ದ ರಮೇಶ್ ಜಾರಕಿಹೊಳಿ ಗೋಕಾಕ್ ಮಿಲ್ನಲ್ಲಿರುವ ಮೈದಾನದಲ್ಲಿ ಬ್ಯಾಡ್ಮಿಂಟನ್ ಆಡಿ ನಿವಾಸಕ್ಕೆ ಹಿಂದಿರುಗುವಾಗ ಪ್ರತ್ಯಕ್ಷರಾಗಿದ್ದರು.
ವರದಿಗಾರರು ರಮೇಶ್ ಅವರ ಮುಂದಿನ ರಾಜಕೀಯ ನಿಲುವುಗಳ ಬಗ್ಗೆ ಪ್ರತಿಕ್ರಿಯೆ ಕೇಳಲು ಮುಂದಾಗಿದ್ದಾರೆ. ಆ ಸಂದರ್ಭದಲ್ಲಿ ಕಾರಿನಿಂದ ಇಳಿಯುತ್ತಿದ್ದಂತೆ ಮಾಧ್ಯಮದವರ ವಿರುದ್ಧ ಈ ರೀತಿ ಗರಂ ಆಗಿ ಮಾತನಾಡಿ, ಯಾವುದೇ ಪ್ರತಿಕ್ರಿಯೆ ನೀಡದೆ ಮನೆಯೊಳಕ್ಕೆ ತೆರಳಿದ್ದಾರೆ.
Advertisement