ಸ್ಟಾರ್ ನಟರ ನಿವಾಸಗಳ ಮೇಲೆ ಐಟಿ ದಾಳಿ ಹಿಂದೆ ಕೇಂದ್ರ ಸರ್ಕಾರ ಕೈವಾಡದ ಶಂಕೆ: ಸಿದ್ದರಾಮಯ್ಯ

ಕನ್ನಡ ಸ್ಟಾರ್ ನಟರು ಹಾಗೂ ಮೂವರು ನಿರ್ಮಾಪಕರುಗಳ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಹಿಂದೆ ಕೇಂದ್ರಸರ್ಕಾರದ ಕೈವಾಡದ ಬಗ್ಗೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತಿತರರು ಅನುಮಾನ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕನ್ನಡ ಸ್ಟಾರ್ ನಟರು ಹಾಗೂ ಮೂವರು ನಿರ್ಮಾಪಕರುಗಳ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಹಿಂದೆ ಕೇಂದ್ರಸರ್ಕಾರದ ಕೈವಾಡದ ಬಗ್ಗೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತಿತರರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕನ್ನಡ  ಚಿತ್ರರಂಗದ ಸ್ಟಾರ್  ನಟರಾದ ಡಾ. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಸುದೀಪ್ , ಯಶ್ ಹಾಗೂ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ , ವಿಜಯ್ ಕಿರಂಗದೂರು, ಜಯಣ್ಣ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಹಿಂದೆ ಕೇಂದ್ರ ಸರ್ಕಾರದ ಬಗ್ಗೆ ಅನುಮಾನವಿದೆ ಎಂದು  ಸಿದ್ದರಾಮಯ್ಯ ಹೇಳಿದ್ದಾರೆ.

ತೆರಿಗೆ ಪಾವತಿಯಲ್ಲಿ ವ್ಯತ್ಯಾಸವಾಗಿದ್ದರೆ ಸಂಬಂಧಿತ ಲೆಕ್ಕಪತ್ರಗಳ  ಪರಿಶೀಲನೆ ನಡೆಸುವ ಅಧಿಕಾರ ಆದಾಯ ತೆರಿಗೆ ಇಲಾಖೆಗೆ ಇದೆ. ಅದನ್ನು ಗೌರವಿಸೋಣ. ಆದರೆ, ಮೋದಿ ಸರ್ಕಾರದ ಐಟಿ ಇಲಾಖೆಯ ಕಾರ್ಯಶೈಲಿಯನ್ನು ಗಮನಿಸಿದರೆ ದಾಳಿ ಹಿಂದೆ ದುರುದ್ದೇಶ ಇರಬಹುದೆಂಬ ಅನುಮಾನ ಮೂಡುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com