ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯಲಿದ್ದು, ಸೀಟು ಹಂಚಿಕೆ ಸಂಬಂಧ ರಾಜ್ಯ ಕಾಂಗ್ರೆಸ್ ನಾಯಕರು ಅಡ್ಡಗಾಲು ಹಾಕುತ್ತಿರುವ ಹಿನ್ನೆಲೆಯಲ್ಲಿ ನೇರವಾಗಿ ರಾಹುಲ್ ಗಾಂಧಿ ಅವರ ಜೊತೆ ಮಾತನಾಡುವುದಾಗಿ ದೇವೇಗೌಡರು ತಿಳಿಸಿದ್ದಾರೆ. ಜೆಡಿಎಸ್ ಪ್ರಾಬಲ್ಯವಿರುವ ಮಂಡ್ಯ, ಮೈಸೂರು, ಹಾಸನ, ತುಮಕೂರು ಸೇರಿದಂತೆ 12 ಕ್ಷೇತ್ರಗಳನ್ನ ಜೆಡಿಎಸ್ ಪಾಲಿಗೆ ಬಿಟ್ಟುಕೊಡುವಂತೆ ಚರ್ಚಿಸುವುದಾಗಿ ಹೇಳಿದ್ದಾರೆ.