ಮೈಸೂರು: ಹಾಸನ ಲೋಕಸಭೆ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಸಲು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಗ್ರೀನ್ ಸಿಗ್ನಲ್ ನೀಡಿದ್ದು, ದೇವೇಗೌಡರು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ, ಇದರ ಬೆನ್ನಲ್ಲೆ ಮಂಡ್ಯ ಕ್ಷೇತ್ರದಿಂದ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಲು ಸ್ಥಳೀಯ ಜೆಡಿಎಸ್ ನಾಯಕರು ಲಾಬಿ ನಡೆಸುತ್ತಿದ್ದಾರೆ.