ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ಪರ್ಧೆ ವಿಚಾರ, ಒಗ್ಗೂಡಿದ ಸ್ಯಾಂಡಲ್ ವುಡ್ ನಿಂದ ಹೈಲೆವೆಲ್ ಮೀಟಿಂಗ್!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಸುಮಲತಾ ಅವರ ಬೆಂಬಲಕ್ಕೆ ಇಡೀ ಸ್ಯಾಂಡಲ್ ವುಡ್ ನಿಂತಿದೆ ಎಂಬ ವಾದ ಕೂಡ ಕೇಳಿಬರುತ್ತಿದೆ.
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಸುಮಲತಾ ಅವರ ಬೆಂಬಲಕ್ಕೆ ಇಡೀ ಸ್ಯಾಂಡಲ್ ವುಡ್ ನಿಂತಿದೆ ಎಂಬ ವಾದ ಕೂಡ ಕೇಳಿಬರುತ್ತಿದೆ.
ಇತ್ತೀಚೆಗೆ ಮಂಡ್ಯದ ಸರ್‌ಎಂವಿ ಕ್ರೀಡಾಂಗಣದಲ್ಲಿ ಅಖಿಲ ಕರ್ನಾಟಕ ಅಂಬರೀಷ್‌ ಅಭಿಮಾನಿಗಳ ಸಂಘ ಆಯೋಜಿಸಿದ್ದ ಅಂಬರೀಷ್‌ ಪುಣ್ಯಸ್ಮರಣೆ, ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಯಾಂಡಲ್ ವುಡ್ ನ ದಿಗ್ಗಜ ಗಣ್ಯರು ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮಾಧ್ಯಮವೊಂದರ ವರದಿ ಅನ್ವಯ ಅಂಬರೀಷ್ ಪುಣ್ಯ ಸ್ಮರಣೆ ಕಾರ್ಯಕ್ರಮದ ಬಳಿಕ ಸಭೆ ಸೇರಿದ್ದ ಸ್ಯಾಂಡಲ್ ವುಡ್ ಗಣ್ಯರು, ಒಂದು ವೇಳೆ ಮಂಡ್ಯದಿಂದ ಸುಮಲತಾ ಅವರು ಸ್ಪರ್ಧಿಸಿದ್ದೇ ಆದರೆ ನಾವೆಲ್ಲರೂ ಒಗ್ಗೂಡಿ ಅವರ ಗೆಲುವಿಗೆ ಶ್ರಮಿಸೋಣ ಎಂಬ ಒಕ್ಕೋರಲಿನ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಸ್ಯಾಂಡಲ್ ವುಡ್ ಹಲವು ನಟ ನಟಿಯರು ಬೇರೆ ಬೇರೆ ಪಕ್ಷಗಳಲ್ಲಿ ಇದ್ದರೂ ಮಂಡ್ಯ ಮತ್ತು ಸುಮಲತಾ ಅಂಬರೀಶ್ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಒಗ್ಗೂಡಿದ್ದು, ಪಕ್ಷ ಬೇದ ಮರೆತು ಸುಮಲತಾ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com