ಕಾರ್ಯಕ್ರಮದ ನಡುವೆ ರೇವಣ್ಣ ಅವರ ಬಳಿ ಪ್ರೀತಮ್ ಗೌಡ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಗೆ ಸಂಬಂಧಪಟ್ಟಂತೆ ಮಾತುಕತೆ ಆರಂಭಿಸಿದರು. ಬಿಜೆಪಿ ಬೆಂಬಲಿಗರ ಕಟ್ಟಡಗಳಲ್ಲಿ ಹೆಚ್ಚಾಗಿ ಒಡೆದು ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ನಿಟ್ಟಿನಲ್ಲಿ ಪ್ರೀತಮ್ ಗೌಡ ತೀವ್ರ ಅಸಮಾಧಾನಗೊಂಡಿದ್ದರು. ತಾವು ಊರಿನಲ್ಲಿ ಇಲ್ಲದ ವೇಳೆಯಲ್ಲಿ ಕಾರ್ಯಾಚರಣೆ ನಡೆಸಿ ಬಿಜೆಪಿ ಬೆಂಬಲಿಗರ ಕಟ್ಟಡಗಳನ್ನು ಒಡೆದಿದ್ದಕ್ಕಾಗಿ ಪ್ರೀತಮ್ ಗೌಡ, ರೇವಣ್ಣ ಅವರ ಜೊತೆ ವಾಗ್ವಾದಕ್ಕೆ ಮುಂದಾದರು.