ಎಸ್ ಟಿ ಸೇಮಶೇಖರ್ ಗೆ ಕೆಪಿಸಿಸಿಯಿಂದ ಶೋಕಾಸ್ ನೊಟೀಸ್-ದಿನೇಶ್ ಗುಂಡೂರಾವ್

ಶಾಸಕ ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾರಣ ಕೇಳಿ ಅವರಿಗೆ ...
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಶಾಸಕ ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾರಣ ಕೇಳಿ ಅವರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗಲು ನಾವು ಬಯಸುತ್ತಿದ್ದೇವೆ. ಮೈತ್ರಿ ಸರ್ಕಾರದ ಆಡಳಿತದಲ್ಲಿ ಬೆಂಗಳೂರಿನ ಅಭಿವೃದ್ಧಿಯ ಕೆಲಸಗಳು ಕುಂಠಿತವಾಗಿವೆ ಎಂದು ಶಾಸಕ ಸೋಮಶೇಖರ್ ನೀಡಿರುವ ಹೇಳಿಕೆಗೆ ದಿನೇಶ್ ಗುಂಡೂರಾವ್ ಗರಂ ಆಗಿದ್ದಾರೆ.

ಪಕ್ಷದ ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು, ಅದನ್ನು ನಾವು ಒಪ್ಪುವುದಿಲ್ಲ. ಅವರಿಗೆ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರಲ್ಲಿ ಚರ್ಚೆ ನಡೆಸಬೇಕಿತ್ತು. ಮೈತ್ರಿ ಸರ್ಕಾರದಲ್ಲಿ ಏನೇ ಸಮಸ್ಯೆಗಳಿದ್ದರೂ ನಮ್ಮ ಬಳಿ ಬಂದು ಚರ್ಚೆ ಮಾಡಬೇಕು. ಅದು ಬಿಟ್ಟು ಬಹಿರಂಗವಾಗಿ ಈ ರೀತಿ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.

ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ, ಅದು ಶಿಸ್ತನ್ನು ಮೀರುವ ಹೇಳಿಕೆ. ಮೈತ್ರಿ ಸರ್ಕಾರ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಗಮನಹರಿಸಿದೆ. ಹಲವು ಯೋಜನೆಗಳನ್ನು ಪ್ರಕಟಿಸಿ ಕೋಟ್ಯಂತರ ರೂಪಾಯಿ ಮೀಸಲಿಟ್ಟಿದೆ. ಇಂತಹ ಸಂದರ್ಭದಲ್ಲಿ ಸೋಮಶೇಖರ್ ಅವರು ಈ ರೀತಿ ಹೇಳಿಕೆ ಏಕೆ ಕೊಟ್ಟಿದ್ದಾರೆ ಎಂದು ಕಾರಣ ಕೇಳಿ ಶೋಕಾಸ್ ನೊಟೀಸ್ ನೀಡಲಾಗುವುದು, ಅವರ ಉತ್ತರ ಅಸಮರ್ಪಕವಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com