ಆದಾಗ್ಯೂ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ,ಜಿ. ಪರಮೇಶ್ವರ್ ಮತ್ತಿತರರು ಶಾಸಕರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಹಲವು ದಿನಗಳಿಂದ ಸರ್ಕಾರ ಆಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ, ಯಶಸ್ಸು ಸಿಗುತ್ತಿಲ್ಲ. ಆ ನಾಟಕದ ಭಾಗವಾಗಿ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದರು.