ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ, ನಾವು ಸೂತ್ರದಾರರು ಅಲ್ಲ, ಪಾತ್ರದಾರರೂ ಅಲ್ಲ, ವೀಕ್ಷಕರು ಮಾತ್ರ . ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರು: ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ, ನಾವು ಸೂತ್ರದಾರರು ಅಲ್ಲ, ಪಾತ್ರದಾರರೂ ಅಲ್ಲ, ವೀಕ್ಷಕರು ಮಾತ್ರ . ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್- ಜೆಡಿಎಸ್ ಮದುವೆ ಮುರಿದು ಬೀಳುವುದಕ್ಕೆ ನಾವು ಪುರೋಹಿತರಲ್ಲ. ಕಾಂಗ್ರೆಸ್ - ಜೆಡಿಎಸ್ ನೇತೃತ್ವದ ಸರ್ಕಾರ ಒಂದು ವರ್ಷದಿಂದ ರಾಜ್ಯವನ್ನು ಲೂಟಿ ಮಾಡಿದೆ. ಆ ಪಕ್ಷಗಳ ನಡುವಿನ ಗೊಂದಲ, ಅಸಮಾಧಾನಗಳ ಕಾರಣಕ್ಕಾಗಿ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದರು.
ಬಿಜೆಪಿಗೂ ಕಾಂಗ್ರೆಸ್ - ಜೆಡಿಎಸ್ ಶಾಸಕರ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ. ಅವರು ರಾಜೀನಾಮೆ ನೀಡುವಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು ಅವರು ಸ್ಪಷ್ಪಪಡಿಸಿದರು.
ಮುಂದಿನ ರಾಜಕೀಯ ನಡೆ ಬಗ್ಗೆ ವರಿಷ್ಠರು ಸಲಹೆ ಸೂಚನೆ ನೀಡಲಿದ್ದಾರೆ. ಅದರನ್ವಯ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಸಮಾಲೋಚಿಸಿ ಎರಡು ಮೂರು ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.