ಬಿಜೆಪಿ ಆಪರೇಷನ್ ಕಮಲದ ಮೂಲಕ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಒಂದು ವರ್ಷದಿಂದಲೂ ನಿರಂತರವಾಗಿ ಪ್ರಯತ್ನಿಸುತ್ತಿದೆ. 2008ರಲ್ಲಿ ಬಿ. ಎಸ್ ಯಡಿಯೂರಪ್ಪ ಇದೇ ರೀತಿ ಮಾಡಿದ್ದರು ಎಂದು ಹೇಳಿದ ಸಿದ್ದರಾಮಯ್ಯ, ಅತೃಪ್ತ ಶಾಸಕರಿಗೆ ವಿಶೇಷ ವಿಮಾನ ಆಯೋಜನೆ ಮಾಡುವವರು ಯಾರು ಎಂದು ಪ್ರಶ್ನಿಸಿದರು. ಇದರ ಹಿಂದೆ ಬಿಜೆಪಿ ಕೇಂದ್ರ ನಾಯಕರಾದ ಅಮಿತ್ ಶಾ, ಪ್ರಧಾನಿ ಮೋದಿ ಕೈವಾಡ ಇದೆ ಎಂದು ಆಪಾದಿಸಿದರು.