ಸರ್ಕಾರ ಉಳಿಸಿಕೊಳ್ಳಲು ಮಾಸ್ಟರ್ ಪ್ಲಾನ್: ಕಾಂಗ್ರೆಸ್ ಸಚಿವರ ಸಾಮೂಹಿಕ ರಾಜಿನಾಮೆ

ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರಂತೆ ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ಅತೃಪ್ತ ಶಾಸಕರು ರಾಜಿನಾಮೆ ಸಲ್ಲಿಸಿದ ಬಳಿಕ ಇದೀಗ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರಂತೆ ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ಅತೃಪ್ತ ಶಾಸಕರು ರಾಜಿನಾಮೆ ಸಲ್ಲಿಸಿದ ಬಳಿಕ ಇದೀಗ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು ಕಾಂಗ್ರೆಸ್ ಸಚಿವರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.
ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರಿಗೆ ಕೆಲ ಸಚಿವರನ್ನು ಬಿಟ್ಟು ಉಳಿದ ಎಲ್ಲಾ ಸಚಿವರು ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೈ ಶಾಸಕರು ಬೇಸರದಿಂದಲೇ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. 
ಇನ್ನು ಕಾಂಗ್ರೆಸ್ ಸಚಿವರ ರಾಜಿನಾಮೆ ಹಿನ್ನೆಲೆಯಲ್ಲಿ ಜೆಡಿಎಸ್ ಸಚಿವರು ಸಹ ರಾಜಿನಾಮೆಗೆ ಮುಂದಾಗಿದ್ದು 12 ಗಂಟೆಗೆ ರಾಜಿನಾಮೆ ನೀಡಲಿದ್ದಾರೆ.
ಇನ್ನು ಮುಳುಬಾಗಿಲಿನ ಪಕ್ಷೇತರ ಶಾಸಕ ನಾಗೇಶ್ ಅವರು ಇತ್ತೀಚೆಗಷ್ಟೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು ದಿಢೀರ್ ಅಂತಾ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com