ಇಂದಿನ ಸಭೆಯಲ್ಲಿ ಆಪರೇಷನ್ ಕಮಲಕ್ಕೆ ಯಾರೂ ಒಳಗಾಗದಂತೆ ತಡೆಯುವುದು, ಅತೃಪ್ತ ಶಾಸಕರ ಮನವೊಲಿಸಿ ವಾಪಸ್ ಕರೆತರುವುದು,ಮೈತ್ರಿ ಸರ್ಕಾರವನ್ನು ರಕ್ಷಿಸಿಕೊಳ್ಳಲು ಶಾಸಕರು ಒಗ್ಗಟ್ಟು ಪ್ರದರ್ಶನ, ವಿಧಾನ ಸಭಾ ಅಧಿವೇಶನದಲ್ಲಿ ಮಹತ್ವದ ವಿಚಾರಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸುವುದು.ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾದರೆ ಸರ್ಕಾರ ವಿಸರ್ಜನೆ,ಮಧ್ಯಂತರ ಚುನಾವಣೆಗೆ ತೆರಳುವುದು, ಸರ್ಕಾರ ಪತನವಾದರೆ ವಿರೋಧ ಪಕ್ಷದಲ್ಲಿ ಕುಳಿತು ಆಡಳಿತ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸುವುದು ಸೇರಿದಂತೆ ಮಹತ್ವದ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ.