ಇಂದು ಕಾಂಗ್ರೆಸ್ ಶಾಸಕಾಂಗ ಸಭೆ : ಮೈತ್ರಿ ಸರ್ಕಾರ ಅಳಿವು ಉಳಿವಿನ ತೀರ್ಮಾನ

ಮೈತ್ರಿ ಸರ್ಕಾರ ಬಹುಮತ ಕಳೆದಕೊಂಡು ಸರ್ಕಾರ ಪತನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮೈತ್ರಿ ಸರ್ಕಾರ ಬಹುಮತ ಕಳೆದಕೊಂಡು ಸರ್ಕಾರ ಪತನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಮಂಗಳವಾರ ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ.ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯ ನೇತೃತ್ವವನ್ನು ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಶಾಸಕಾಂಗ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಹಿಸಿಕೊಳ್ಳಲಿದ್ದಾರೆ.
ಇಂದಿನ ಸಭೆಯಲ್ಲಿ ಆಪರೇಷನ್ ಕಮಲಕ್ಕೆ ಯಾರೂ ಒಳಗಾಗದಂತೆ ತಡೆಯುವುದು, ಅತೃಪ್ತ ಶಾಸಕರ ಮನವೊಲಿಸಿ ವಾಪಸ್ ಕರೆತರುವುದು,ಮೈತ್ರಿ ಸರ್ಕಾರವನ್ನು ರಕ್ಷಿಸಿಕೊಳ್ಳಲು ಶಾಸಕರು ಒಗ್ಗಟ್ಟು ಪ್ರದರ್ಶನ, ವಿಧಾನ ಸಭಾ ಅಧಿವೇಶನದಲ್ಲಿ ಮಹತ್ವದ ವಿಚಾರಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸುವುದು.ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾದರೆ ಸರ್ಕಾರ ವಿಸರ್ಜನೆ,ಮಧ್ಯಂತರ ಚುನಾವಣೆಗೆ ತೆರಳುವುದು, ಸರ್ಕಾರ ಪತನವಾದರೆ ವಿರೋಧ ಪಕ್ಷದಲ್ಲಿ ಕುಳಿತು ಆಡಳಿತ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸುವುದು ಸೇರಿದಂತೆ ಮಹತ್ವದ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com