ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್, ರಾಮಲಿಂಗಾರೆಡ್ಡಿ, ಕೆ. ಸಿ. ನಾರಾಯಣಗೌಡ, ಪ್ರತಾಪ್ ಗೌಡ ಮತ್ತು ಕೆ. ಗೋಪಾಲಯ್ಯ ಸಲ್ಲಿಸಿರುವ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿದ್ದು, ಜುಲೈ 12 ರಂದು ವೈಯಕ್ತಿಕ ವಿಚಾರಣೆಗೆ ಹಾಜರಾಗುವಂತೆ ಆನಂದ್ ಸಿಂಗ್, ಕೆ. ಗೋಪಾಲಯ್ಯ, ಮತ್ತು ಕೆಸಿ ನಾರಾಯಣಗೌಡ ಅವರಿಗೆ ಸೂಚಿಸಲಾಗಿದೆ ಎಂದರು.