ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗುವುದು ಬಹುತೇಕ ಖಚಿತವಾದಂತಿದೆ.
ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಇಂದು ಬೆಳಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮುಂಬಯಿಗೆ ತೆರಳಿದ್ದಾರೆ ಎನ್ನಲಾಗಿದೆ,
ಮುಂಬಯಿಗೆ ತೆರಳುತ್ತಿದ್ದ ಶ್ರೀನಿವಾಸಗೌಡ ಅವರನ್ನು ಪ್ರಶ್ನಿಸಿದ ವೇಳೆ ಉತ್ತರಿಸಿದ ಅವರು, ನಾನು ದೆಹಲಿಗೆ ಹೋಗುತ್ತಿದ್ದೇನೆ, ಯಾವುದೋ ಮೀಟಿಂಗ್ ಇದೆ,ಅದಕ್ಕಾಗಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ವಿಜೇಯೇಂದ್ರ ಜೊತೆ ಶ್ರೀನಿವಾಸ ಗೌಡ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ ಎಂಗು ಹೇಳಲಾಗುತ್ತಿದೆ.