ಬೆಂಗಳೂರು: 16 ಶಾಸಕರ ರಾಜೀನಾಮೆಯೊಂದಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಈ ಕೂಡಲೇ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸುತ್ತಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಮಾತ್ರ ತಾವು ಅವಿಶ್ವಾಸ ನಿರ್ಣಯ ಎದುರಿಸಲು ಸಿದ್ಧ ಎಂದು ಗುರುವಾರ ಹೇಳಿದ್ದಾರೆ.