ಅಲ್ಲದೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ತಮ್ಮ ಶಾಸಕರಿಗೆ ವಿಪ್ ಕೂಡ ಜಾರಿ ಮಾಡಿದ್ದು, ಸೋಮವಾರ ಅಥವಾ ಮಂಗಳವಾರ ನಡೆಯುವ ವಿಶ್ವಾಸ ಮತ ಯಾಚನೆ ವೇಳೆ ಅವರು ಕಡ್ಡಾಯವಾಗಿ ಹಾಜರಿದ್ದು, ಪಕ್ಷ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧರಾಗಿರಬೇಕು. ಇನ್ನು ಈ ಕುರಿತಂತೆ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಸೋಮವಾರವೇ ವಿಶ್ವಾಸ ಮತ ಯಾಚನೆ ಮಾಡುವಂತೆ ಸಿಎಂ ಎಚ್ ಡಿಕೆಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.