ಎಂಟಿಬಿ ನಾಗರಾಜ್ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಾಸ್ ಪಡೆಯುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು , ಅದು ನನಗೆ ತಿಳಿದಿಲ್ಲ. ಮೈತ್ರಿ ಪಕ್ಷಗಳಿಂದ ರಿವರ್ಸ್ ಆಪರೇಷನ್ ಮಾಡುವ ಬಗ್ಗೆ ಬಿಜೆಪಿ ನಾಯಕರಿಗೆ ಭಯವಿದೆ. ಅತೃಪ್ತ ಶಾಸಕರನ್ನು ಮನವೊಲಿಸುವ ಕೆಲಸವನ್ನು ಎಲ್ಲರೂ ಮಾಡುತ್ತಿದ್ದಾರೆ. ಹೀಗಾಗಿ ಮೈತ್ರಿ ಸರ್ಕಾರ ಉಳಿಯಲಿದೆ ಎಂದು ಅವರು ಹೇಳಿದರು.