ಮುಂಬಯಿ: ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಮುಂಬಯಿಯಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್- ಜೆಡಿಎಸ್ ಶಾಸಕರು ಇಂದು ಶಿರಡಿ ಸಾಯಿಬಾಬಾ ದರ್ಶನ ಪಡೆದಿದ್ದಾರೆ..ಇಂದು ಬೆಳಗ್ಗೆ ಅತೃಪ್ತ ಶಾಸಕರು ಮುಂಬೈ ವಿಮಾನ ನಿಲ್ದಾನದಿಂದ 18 ಆಸನದ ವಿಶೇಷ ವಿಮಾನದದಲ್ಲಿ ಶಿರಡಿಗೆ ತೆರಳಿ ಬಾಬಾ ದರ್ಶನ ಪಡೆದಿದ್ದಾರೆ. .ಶಿರಡಿ ನಂತರ , ಶನಿಸಿಂಗ್ಣಾಪುರ, ಅಜಂತಾ ಎಲ್ಲೋರಾ ಗುಹೆ ಮುಂತಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಣೆ ಮಾಡಿ ಬಳಿಕ ಹಿಂತಿರುಗಲಿದ್ದಾರೆ.ಇಂದು ರಾತ್ರಿ ಔರಂಗಾಬಾದ್ನಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ನಾಶಿಕ್ಗೆ ತೆರಳಿ ಅಲ್ಲಿಂದ ತ್ರಯಂಬಕೇಶ್ವರನ ದರ್ಶನ ಪಡೆದು ಮರಳಿ ಮುಂಬೈಗೆ ವಾಪಸಾಗಲಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos