ಬಿಎಲ್ ಸಂತೋಷ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಸಂತೋಷ್ ಅವರ ಪದೋನ್ನತಿ ತಮಗೆ ಅತೀವ ಸಂತಸ ಉಂಟುಮಾಡಿದ್ದು, ಸಂತೋಷ್ ಅವರು ರಾಜ್ಯ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಕೊಂಡಿಯಾಗಿ ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುವುದರಿಂದ ರಾಜ್ಯದ ಕಾರ್ಯಕರ್ತರಿಗೆ ಅತೀವ ಸಹಾಯವಾಗಲಿದೆ, ಅವರನ್ನು ಉನ್ನತ ಹುದ್ದೆಗೆ ನೇಮಕ ಮಾಡಿರುವುದಕ್ಕೆ ಅಮಿತ್ ಶಾ ಹಾಗೂ ಬಿಜೆಪಿ ಕಾರ್ಯಧ್ಯಕ್ಷ ಜೆಪಿ ನಡ್ಡಾ ಅವರಿಗೂ ನನ್ನ ಅಭಿನಂದನೆಗಳು ಎಂದು ಹೇಳಿದ್ದಾರೆ.