ಕಾಂಗ್ರೆಸ್ ನಾಯಕರು ರಾಮಲಿಂಗಾ ರೆಡ್ಡಿ ಅವರ ಮೂಲಕ ಮುಂಬೈನಲ್ಲಿರುವ ಕೆಲ ಅತೃಪ್ತರ ಮನವೊಲಿಸುವ ಪ್ರಯತ್ನ ನಡೆಸಿದ್ದು. ರಾಜೀನಾಮೆ ನೀಡಿದ ಬೆಂಗಳೂರು ನಗರದ ಶಾಸಕಾರದ ಭೈರತಿ ಬಸವರಾಜು, ಎಸ್.ಟಿ. ಸೋಮಶೇಖರ್, ಮುನಿರತ್ನ ಮತ್ತು ಗೋಪಾಲಯ್ಯ ಅವರು ರಾಮಲಿಂಗಾ ರೆಡ್ಡಿ ಮಾತಿಗೆ ಬೆಲೆ ಕೊಡಬಹುದು. ಒಂದು ವೇಳೆ, ಇದು ಹೌದಾದಲ್ಲಿ ಡಾ| ಕೆ. ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ಕೂಡ ಮನಸು ಬದಲಾಯಿಸಬಹುದು ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ ಮತ್ತು ಆಶಯ.