ರಮಡಾ ಹೋಟೇಲಿನ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕುಡುಚಿ ಶಾಸಕ ರಾಜೀವ್, ಮುಖುಲ್ ರೋಹ್ಟಗಿ ಅವರ ವಾದ ಗಮನಿಸಿದ ನಂತರ ಮೈತ್ರಿ ಸರ್ಕಾರ ಸ್ಪೀಕರ್ ಅವರನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಇಡೀ ರಾಜ್ಯಕ್ಕೆ ಗೊತ್ತಾಗಿದೆ.ರಾಜೀನಾಮೆ ನೀಡುವುದು ಶಾಸಕರ ಹಕ್ಕು. ಅವರ ಸ್ವತಂತ್ರ ನಿರ್ಧಾರಕ್ಕೆ ಬಿಟ್ಟದ್ದಾಗಿದೆ.ನಮಗೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಇಡೀ ರಾಜ್ಯದ ಜನರು ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಿದ್ದಾರೆ. ಜನರ ನಿರೀಕ್ಷೆ ಆದಷ್ಟು ಶೀಘ್ರದಲ್ಲಿ ಈಡೇರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.