ರಾಜ್ಯದ 15 ಬಂಡಾಯ ಶಾಸಕರ ರಾಜೀನಾಮೆ ಸಂಬಂಧ ನಿಗದಿತ ಕಾಲಮಿತಿಯೊಳಗೆ ನಿರ್ಧಾರ ಪ್ರಕಟಿಸುವಂತೆ ಸ್ಪೀಕರ್ ಗೆ ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಬುಧವಾರ ಸ್ಪಷ್ಟಪಡಿಸಿದೆ. ಆದರೆ, ಗುರುವಾರ ನಡೆಯಲಿರುವ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸದನದಲ್ಲಿ ಹಾಜರಿರುವಂತೆ ಅತೃಪ್ತ ಶಾಸಕರನ್ನು ಒತ್ತಾಯಿಸಲು ಕೂಡ ಅವಕಾಶವಿಲ್ಲ ಎಂದು ತಿಳಿಸಿದೆ.