ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ: ರೆಸಾರ್ಟ್ ನಿಂದ ಮತ್ತೊಬ್ಬ ಶಾಸಕ ರಾತ್ರೋ ರಾತ್ರಿ ಪರಾರಿ!

ವಿಶ್ವಾಸ ಮತಯಾಚನೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿರುವ ಪ್ರಕೃತಿ ರೆಸಾರ್ಟ್ ನಿಂದ ಶಾಸಕರೊಬ್ಬರು ನಾಪತ್ತೆಯಾಗಿದ್ದಾರೆ.
ಶ್ರೀಮಂತ್ ಪಾಟೀಲ್
ಶ್ರೀಮಂತ್ ಪಾಟೀಲ್
ಬೆಂಗಳೂರು: ವಿಶ್ವಾಸ ಮತಯಾಚನೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿರುವ ಪ್ರಕೃತಿ ರೆಸಾರ್ಟ್ ನಿಂದ ಶಾಸಕರೊಬ್ಬರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 
...
ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ನ ಸುಪರ್ಧಿಯಲ್ಲಿದ್ದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ರಾತ್ರೋರಾತ್ರಿ ಪಲಾಯನ ಮಾಡಿದ್ದಾರೆ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
ನಿನ್ನೆ ರಾತ್ರಿ ಹೊರಗೆ ಹೋಗಿಬರುವುದಾಗಿ ಹೇಳಿ ಹೋಗಿದ್ದ ಶ್ರೀಮಂತ ಪಾಟೀಲ್  ಬಿಜೆಪಿ ಪಾಳಯಕ್ಕೆ ದೊರೆತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿವೆ ಎಂದು ತಿಳಿದು ಬಂದಿದೆ.
.
ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರು ತಾವು ವಿಧಾನಸಭೆಗೆ ಹಾಜರಾಗುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಈಗ ಈ ಇಬ್ಬರೂ ಶಾಸಕರು ಕೈ ಕೊಟ್ಟರೆ ಮೈತ್ರಿ ಸರ್ಕಾರ ವಿಶ್ವಾಸ ಮತದಲ್ಲಿ ಸೋಲು ಅನುಭವಿಸುವ ಸಾಧ್ಯತೆ ಹೆಚ್ಚಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com