ಬಿಜೆಪಿ ಶಾಸಕರು ನಮ್ಮ ಮನೆಗೆ ಬಂದು 5 ಕೋಟಿ ರು ಹಣ ಇಟ್ಟು ಹೋಗಿದ್ದರು ಎಂದು ಶಾಸಕ ಶ್ರೀನಿವಾಸ ಗೌಡ ಆರೋಪಿಸಿದ್ದಾರೆ. ಬಿಜೆಪಿ ಶಾಸಕರಾದ ಅಶ್ವತ್ಥ ನಾರಾಯಣ, ಎಸ್ ಆರ್ ವಿಶ್ವನಾಥ್ ಹಾಗೂ ಮಾಜಿ ಶಾಸಕ ಸಿಪಿ ಯೋಗೇಶ್ವರ್ ನಮ್ಮ ಮನೆಗೆ ಬಂದು 5 ಕೋಟಿ ಹಣ ಇಟ್ಟರು, ಆದರೆ ನಾನು ಆ ರೀತಿಯಲ್ಲ ಎಂದು ಹೇಳಿ ಕಳುಹಿಸಿದೆ ಎಂದು ಮತ್ತೊಮ್ಮೆ ಆರೋಪಿಸಿದ್ದಾರೆ.