ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ನಾಯಕರು ಅವರ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರ ರಾಜಕಾರಣ ಅವರಿಗೆ, ನಮ್ಮ ರಾಜಕಾರಣ ನಮಗೆ, ಅತೃಪ್ತ ಶಾಸಕರು ವಾಪಸ್ ಬರಲು ಸಿದ್ಧರಿದ್ದಾರೆ. ಆದರೆ ಮುಂಬೈನಲ್ಲಿರುವ ಶಾಸಕರು ಇಂದಿಗೂ ಗನ್ ಪಾಯಿಂಟ್ ನಲ್ಲಿದ್ದಾರೆ. ಯಾರಿಗೂ ಮುಕ್ತವಾಗಿ ದೂರವಾಣಿಯಲ್ಲಿ ಮಾತನಾಡುವುದಕ್ಕೆ ಬಿಡುತ್ತಿಲ್ಲ, ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದಾರೆ. ಆರು ಜನ ಶಾಸಕರನ್ನು ಲೋನಾವಾಲಾದಲ್ಲಿ, ಇನ್ನು ಉಳಿದ ಶಾಸಕರನ್ನು ಬೇರೆ ಕಡೆ ಸ್ಥಳಾಂತರ ಮಾಡಿದ್ದಾರೆ. ಎಲ್ಲಾ ಕಡೆಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಿದ್ದಾರೆ ಎನ್ನುವ ಮೂಲಕ ಶಾಸಕರನ್ನು ಬಂಧನದಲ್ಲಿಟ್ಟಿದ್ದಾರೆಂದು ಹೇಳಿದರು.