ಬಿಜೆಪಿ ಶಾಸಕರನ್ನು ಪ್ರಚೋದನೆ ಮಾಡುವುದೇ ಮೈತ್ರಿ ಸರ್ಕಾರ ನಾಯಕರ ಉದ್ದೇಶವಾಗಿದೆ. ಆದರೆ ನಾವು ಶಿಸ್ತಿನಿಂದ, ಸಂಯಮದಿಂದ ಸದನದಲ್ಲಿದ್ದೇವೆ. ನಾವು ಯಾವ ಅಧಿಕಾರಕ್ಕೂ ಅಂಟಿಕೊಂಡಿಲ್ಲ. ಸರ್ಕಾರ ನಮ್ಮ ಅಪ್ಪನ ಮನೆಯ ಆಸ್ತಿಯೂ ಅಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ ವಿಶ್ವಾಸ ಮತ ಯಾಚನೆ ಮಾಡದೆ ಗೂಟ ಹೊಡೆದುಕೊಂಡು ಕುಳಿತಿದ್ದೀರಾ ? ಎಂದು ಪ್ರಶ್ನಿಸಿದ ರೇಣುಕಾಚಾರ್ಯ, ಇನ್ನು ಎಷ್ಟು ದಿನ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳುತ್ತೀರಾ, ರಾಜೀನಾಮೆ ಕೊಟ್ಟುಹೋಗಿ ಎಂದು ಮುಖ್ಯಮಂತ್ರಿಗೆ ತಿರುಗೇಟು ನೀಡಿದರು.