ನಾಳೆ ವಿಚಾರಣೆಗೆ ಹಾಜರಾಗಿ: ರಾಜ್ಯದ ಅತೃಪ್ತ ಶಾಸಕರಿಗೆ ಸ್ಪೀಕರ್ ಸಮನ್ಸ್ ಜಾರಿ

ರಾಜ್ಯ ರಾಜಕೀಯದಲ್ಲಿ ಸರ್ಕಾರಕ್ಕೆ ಮಗ್ಗುಲ ಮುಳ್ಲಾಗಿ ಕಾಡುತ್ತಿರುವ ಅತೃಪ್ತ ಶಾಸಕರಿಗೆ ವಿಚಾರಣೆಗೆ ಹಾಜರಾಗಬೇಕೆಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಮನ್ಸ್ ಜಾರಿ ಮಾಡಿದ್ದಾರೆ
ಕೆ.ಆರ್.ರಮೇಶ್ ಕುಮಾರ್
ಕೆ.ಆರ್.ರಮೇಶ್ ಕುಮಾರ್
Updated on
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸರ್ಕಾರಕ್ಕೆ ಮಗ್ಗುಲ ಮುಳ್ಲಾಗಿ ಕಾಡುತ್ತಿರುವ ಅತೃಪ್ತ ಶಾಸಕರಿಗೆ ವಿಚಾರಣೆಗೆ ಹಾಜರಾಗಬೇಕೆಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಮನ್ಸ್ ಜಾರಿ ಮಾಡಿದ್ದಾರೆ
ಜುಲೈ 23 ರಂದು ಬೆಳಿಗ್ಗೆ 11 ಗಂಟೆಗೆ ಮುಂಬೈನಲ್ಲಿ ನೆಲೆಯಾಗಿರುವ ಎಲ್ಲಾ ಅತೃಪ್ತ ಶಾಸಕರು ತಮ್ಮ ಕಚೇರಿಯಲ್ಲಿ ಭೇಟಿಯಾಗುವಂತೆ ಸಮನ್ಸ್ ನೀಡಿದ್ದಾರೆ.
ಕಳೆದ ಹದಿನೈದು ದಿನಗಳಿಂದಲೂ ಜೆಂಡಿಎಸ್-ಕಾಂಗ್ರೆಸ್ ನ ಹದಿನೈದು ಶಾಆಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈ ಹೋಟೆಲ್ ನಲ್ಲಿ ನೆಲೆಸಿದ್ದು ರಾಜೀನಾಮೆ ಅಂಗೀಕರಿಸಿ ಎಂದು ಸ್ಪೀಕರ್ ಅವರಿಗೆ ಒತ್ತಡ ಹಾಕುತ್ತಿದ್ದಾರೆ. ಈ ಅತೃಪ್ತ ಶಾಸಕರ ಕಾರಣದಿಂದಾಗಿ ವಿಧಾನಸಭೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com