ಬಿಜೆಪಿಗೆ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ- ಕೆ. ಸಿ. ವೇಣುಗೋಪಾಲ್

ಸದ್ಯದ ರಾಜಕೀಯ ಅಸ್ಥಿರತೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ, ಸರ್ಕಾರ ರಚನೆ ಮಾಡುವಷ್ಟು ಬಿಜೆಪಿಗೂ ಬೆಂಬಲವಿಲ್ಲ ಎಂದು ಕೆಪಿಸಿಸಿ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ.
ಕೆ. ಸಿ. ವೇಣುಗೋಪಾಲ್
ಕೆ. ಸಿ. ವೇಣುಗೋಪಾಲ್
Updated on
ಬೆಂಗಳೂರು: ಸದ್ಯದ ರಾಜಕೀಯ ಅಸ್ಥಿರತೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ, ಸರ್ಕಾರ ರಚನೆ ಮಾಡುವಷ್ಟು ಬಿಜೆಪಿಗೂ ಬೆಂಬಲವಿಲ್ಲ ಎಂದು ಕೆಪಿಸಿಸಿ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆ ಮಾಡುವಷ್ಟು ಬಹುಮತ ಹೊಂದಿಲ್ಲ. ಅವರು ಬೇರೆ ಇನ್ನಾವುದಕ್ಕೂ ಕಾಯುವಂತಿದೆ ಎಂದರು.
ಬಿಜೆಪಿಗೆ ಇರುವುದು ಕೇವಲ 105 ಸದಸ್ಯರ ಬಲ ಮಾತ್ರ, ಜಾರಿ ನಿರ್ದೇಶನಾಲಯ, ಸಿಬಿಐ ಮೂಲಕ ಎಲ್ಲರನ್ನು ಹೆದರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಹಣಬಲದಿಂದ ಅಧಿಕಾರ ಹಿಡಿಯಲು ವಾಮಮಾರ್ಗದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಆಟ ಬಹಳ ದಿನಗಳ ನಡೆಯಲು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com