ಇನ್ನೂ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ರಾಜು ಕಾಗೆ ಅವರನ್ನು ಸಂಪರ್ಕಿಸಿ, ಶ್ರೀಮಂತ ಪಾಟೀಲ್ ವಿರುದ್ಧ ಕಾಂಗ್ರೆಸ್ ನಿಂದ ಕಣಕ್ಕಿಳಿಯುಂತೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ, ಸರ್ಕಾರ ಉರುಳಿಸಲು ಕಾರಣವಾದ ಬಂಡಾಯ ಶಾಸಕರ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದು, ಅವರಿಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಎಲ್ಲಾ ಬಂಡಾಯ ಕಾಂಗ್ರೆಸ್ ಶಾಸಕರನ್ನು ಸೋಲಿಸಲು ಕೈ ನಾಯಕರು ತಂತ್ರ ರೂಪಿಸುತ್ತಿದ್ದಾರೆ.