ಬೆಂಗಳೂರಿನ 4 ಶಾಸಕರನ್ನು ಮಣಿಸಲು ಜೆಡಿಎಸ್ ವರಿಷ್ಠರಿಂದ ಪ್ರತಿತಂತ್ರ

ತಮ್ಮ ವಿಧಾನಸಭಾ ಸದಸ್ಯತ್ವಗಳಿಗೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ...
ಹೆಚ್ ಡಿ ದೇವೇಗೌಡ
ಹೆಚ್ ಡಿ ದೇವೇಗೌಡ
Updated on

ಬೆಂಗಳೂರು: ತಮ್ಮ ವಿಧಾನಸಭಾ ಸದಸ್ಯತ್ವಗಳಿಗೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಶಾಸಕರಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮುಂದಾಗಿದ್ದಾರೆ.


ಬೆಂಗಳೂರು ನಗರದ ಈ ನಾಲ್ವರು ಶಾಸಕರು ಉಪಚುನಾವಣೆಯಲ್ಲಿ ಗೆಲುವು ಸಾಧಿಸದಂತೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. 
 ಕೆ ಆರ್ ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್, ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಹಾಗೂ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಜೆಡಿಎಸ್ ಶಾಸಕ ಗೋಪಾಲಯ್ಯ ಮೈತ್ರಿ ಸರ್ಕಾರದ ವಿರುದ್ಧ ಕಾರ್ಯಾಚರಣೆ ನಡೆಸಿದ್ದಲ್ಲದೆ, ಸರ್ಕಾರ ಪತನಕ್ಕೆ ಕಾರಣರಾಗಿದ್ದರು. 
ಹೀಗಾಗಿ ಇವರನ್ನು ಶತಾಯಗತಾಯ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಭರ್ಜರಿ ಕಾರ್ಯತಂತ್ರ ಸಿದ್ದಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com