ಯಡಿಯೂರಪ್ಪ ಪದಗ್ರಹಣ ಸಮಾರಂಭಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರನ್ನು ಆಹ್ವಾನಿಸಲಾಗಿತ್ತು, ಆದರೆ, ಯಡಿಯೂರಪ್ಪ ಅನೈತಿಕವಾಗಿ ಮುಖ್ಯಮಂತ್ರಿಯಾಗಿರುವುದರಿಂದ ಅವರ ಪದಗ್ರಹಣ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಬಹಿಷ್ಕರಿಸಿದ್ದರು ಎಂದು ಕಾಂಗ್ರೆಸ್ ವಕ್ತಾರ ರವಿಗೌಡ ತಿಳಿಸಿದರು.
ಜೆಡಿಎಸ್ ನಾಯಕರು ಕೂಡಾ ಯಡಿಯೂರಪ್ಪ ಪದಗ್ರಹಣ ಸಮಾರಂಭದಿಂದ ದೂರ ಉಳಿದಿದ್ದರು. ಬೇರೆ ಬೇರೆ ಕಾರಣಗಳಿಂದ ಪದಗ್ರಹಣ ಕಾರ್ಯಕ್ರಮದಿಂದ ದೂರ ಉಳಿದಿದ್ದಾಗಿ ಜೆಡಿಎಸ್ ವಕ್ತಾರ ರಮೇಶ್ ಬಾಬು ಹೇಳಿದರು
ಈ ಮಧ್ಯೆ ಯಡಿಯೂರಪ್ಪ ಸರ್ಕಾರ ಹೆಚ್ಚಿನ ದಿನ ಉಳಿಯಲಾರದು ಎಂದು ಜೆಡಿಎಸ್ ಹಿರಿಯ ಶಾಸಕ ಬಸವರಾಜ್ ಹೊರಟ್ಟಿ ಭವಿಷ್ಯ ನುಡಿದಿದ್ದಾರೆ.
Advertisement